Recent Posts

ಮಂಗಳೂರು : ಮತದಾರರ ಪಟ್ಟಿಯಲ್ಲಿ ಅಬ್ದುಲ್ ನಾಯಿ ಹಾಗೂ ಗಡಸ್ ಹೆಸರು ಸೇರ್ಪಡೆ

ಮಂಗಳೂರು: ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವಾಗ ಎಷ್ಟು ಎಚ್ಚರವಹಿಸಿದರೂ ಕೂಡ ಕೆಲವೊಂದು ಎಡವಟ್ಟುಗಳು ನಡೆಯುತ್ತಲೇ ಇರುತ್ತದೆ.ಆದರೆ ಇಲ್ಲಿ ಮತದಾರರ ಪಟ್ಟಿಯಲ್ಲಿ ಎರಡು ವಿಚಿತ್ರ ಹೆಸರುಗಳು ಸೇರ್ಪಡೆಯಾಗಿದೆ. ಇದಕ್ಕಿಂತ ಒಂದು ಹೆಜ್ಜೆ ಹೋಗಿ ನಾಯಿ-ಹಸುಗಳೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿದೆ ಎನ್ನವಂತೆ ಎರಡು ಮತ ಚೀಟಿಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಹೆಸರುಗಳು ಹೊಟ್ಟೆ ಹುಣ್ಣಾಗುವಂತೆ ನಗು ತರಿಸಿದರೂ ಮತದಾರರ ಪಟ್ಟಿಯಲ್ಲಿ ಪ್ರಾಣಿಗಳೂ ಸ್ಥಾನ ಪಡೆದಿರುವುದನ್ನು ಕಂಡ ಸಾರ್ವಜನಿಕರು ಈ ರೀತಿಯ ಪ್ರಮಾದ ಎಸಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪುತ್ತೂರು …

Read More »

ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ

ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), …

Read More »

ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ- ಲಾರಿ ಚಾಲಕ ಗಂಭೀರ

ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಲಾರಿ ಪಕ್ಕದ ಗ್ರಾನೈಟ್ ಮಳಿಗೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಗ್ರಾನೆಟ್ ಗೆ ಹಾನಿಯಾಗಿದೆ.  ಮಂಗಳೂರಿನಿಂದ ಮಲ್ಪೆಗೆ ಮೀನು ಸಾಗಾಟ ಮಾಡುತ್ತಿದ್ದ ಮತ್ತೊಂದು ಹಳೆಯ ಲಾರಿ ಸಂಪೂರ್ಣ ಹಾನಿಗೀಡಾಗಿದೆ. ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭಾಗದಲ್ಲಿ ಮಹಿಳಾ ಮೀನುಗಾರರು ನಿತ್ಯ ಮೀನು ಮಾರಾಟಕ್ಕೆ ಕುಳಿತುಕೊಳ್ಳುತ್ತಿದ್ದು, ಅಪಘಾತ …

Read More »

You cannot copy content of this page.