Recent Posts

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು..!

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಮುಂಡಾಡಿ ಮನೆ ನಿವಾಸಿ ಪ್ರಶಾಂತ್ ಮೃತ ಯುವಕ. ಅವರು ಸೆ 18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

Read More »

ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

ಅಮಾಸೆಬೈಲು, ಸೆ.23: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು ಬಳಿಕ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ತೊಂಬಟ್ಟು ಸಮೀಪದ ಕಬ್ಬಿನಾಲೆ ಎಂಬಲ್ಲಿ ವಿವೇಕಾನಂದ ಪತ್ತೆಯಾಗಿದ್ದಾರೆ. ಕಳೆದ ಎಂಟು ದಿನಗಳಿಂದ ಕಾಡಿನೊಳಗೆಯೇ ಯಾವುದೇ ಆಹಾರ ಇಲ್ಲದೆ ಅಲೆದಾಡಿದ್ದ ವಿವೇಕಾನಂದ, ಕಬ್ಬಿನಾಲೆಯ ಮನೆಯೊಂದರ ಸಮೀಪ ಪತ್ತೆ ಯಾಗಿದ್ದಾರೆ. ಎಂಟು ದಿನಗಳಿಂದ ಅನ್ನ ಆಹಾರ ಇಲ್ಲದೆ ಅವರು ತೀವ್ರ …

Read More »

ಗಣೇಶ ಉತ್ಸವದ ವೇಳೆ ಕಲ್ಲು ತೂರಾಟ : ಎರಡು ಕೋಮುಗಳ ನಡುವೆ ಸಂಘರ್ಷ

ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಎರಡು ಕೋಮುಗಳ ನಡುವೆ ಸಂಘರ್ಷ ನಡೆದಿದೆ ಎನ್ನಲಾಗುತ್ತಿದೆ. ಮೆರವಣಿಗೆ ಸಾಗುವಾಗ ಮಸೀದಿ ಮುಂಭಾಗ ರಸ್ತೆಯಲ್ಲಿ ದೊಡ್ಡ ಗಾತ್ರದ ಪಟಾಕಿಗಳನ್ನು ಸಿಡಿಸಿದ ಪರಿಣಾಮ ಗಲಭೆ ಆರಂಭವಾಗಿದೆ. ಪೊಲೀಸರು ಮೆರವಣಿಗೆಯನ್ನು ಮುಂದಕ್ಕೆ ಕಳಿಸಿದ್ದಾರೆ. ಮಸೀದಿಯಲ್ಲಿ ನಮಾಜ್‌ಗೆ ತೆರಳಿದವರು ಹೆಳುವಂತೆ ಬೇರೆಡೆಯಿಂದ ಬಂದವರು ಮಸೀದಿಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮ್ಮ ಬಳಿ ಕಲ್ಲು ತೂರಾಟದ ವಿಡೀಯೊಗಳಿವೆ ಎನ್ನುತ್ತಿದ್ದಾರೆ. ಕಲ್ಲು ತೂರಾಟ ಸುದ್ದಿ ಹರಡುತ್ತಿದ್ದಂತೆ ಮುಸ್ಲಿಂ ಸಮುದಾಯದವರು …

Read More »

You cannot copy content of this page.