ಸುಳ್ಯ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು

ಸುಳ್ಯ : ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ. ಮೃತರನ್ನು ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಮೀರ್‌ (27) ಎಂದು ಗುರುತಿಸಲಾಗಿದೆ.

ಸಮೀರ್‌ ಸುಳ್ಯದಲ್ಲಿ ರೂಮ್‌ ಮಾಡಿಕೊಂಡು ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಜೆ ಹಿನ್ನೆಲೆಯಲ್ಲಿ ಮೂವರು ಯುವಕರು ಬೆಳಗ್ಗೆ ಬಟ್ಟೆ ಒಗೆಯಲು ಪಯಸ್ವಿನಿ ನದಿಗೆ ಇಳಿದಿದ್ದರು. ಸಮೀರ್‌ ಬಟ್ಟೆ ತೊಳೆದು ಸ್ನಾನಕ್ಕೆ ಇಳಿದಿದ್ದು, ಉಳಿದ ಇಬ್ಬರು ಬಟ್ಟೆ ಒಗೆಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸಮೀರ್‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ದಳದ ತಂಡ ಕಾರ್ಯಚರಣೆ ನಡೆಸಿ ಮೃತಹೇಹ ಮೇಲಕ್ಕೆತ್ತಿದರು. ಸುಳ್ಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Check Also

ಉಡುಪಿ: ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ …

Leave a Reply

Your email address will not be published. Required fields are marked *

You cannot copy content of this page.