May 7, 2026
WhatsApp Image 2024-01-11 at 8.53.11 AM

ಮಂಗಳೂರು : ಪೊಲೀಸ್ ಮೇಲೆಯೇ ದಾಳಿಗೆತ್ನಿಸಿ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟೋರಿಯಸ್ ರೌಡಿ ಆಕಾಶಭವನ ಶರಣ್ (37)ಗೆ ಆಶ್ರಯ ನೀಡಿರುವ ಆರೋಪದಲ್ಲಿ 7 ಮಂದಿಯ ವಿರುದ್ಧ ವಿವಿಧ ಠಾಣೆಗಳಲ್ಲಿ 5 ಪ್ರಕರಣ ದಾಖಲಾಗಿದೆ. ಸುಮಾರು 21ಕ್ಕಿಂತಲೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆಕಾಶಭವನ ಶರಣ್ ಪತ್ತೆಗೆ ಸಿಸಿಬಿ ಪೊಲೀಸರು 20 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು‌. ಈ ವೇಳೆ ತಲೆಮರೆಸಿಕೊಳ್ಳಲು ವಿವಿಧ ಕಡೆಗಳಲ್ಲಿ ಆತನಿಗೆ ಹಲವರು ಸಹಾಯ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಆಶ್ರಯ ನೀಡಿದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೋಡಿಕಲ್‌ ನಿವಾಸಿ ಶೀಲಾ, ಉಡುಪಿ ಸಂತೆಕಟ್ಟೆ ನಿವಾಸಿ ಶರತ್ ಭಂಡಾರಿ ಹಾಗೂ ಆತನ ಪತ್ನಿ ಮಯೂರಿ ಭಂಡಾರಿ, ಧನಂಜಯ ಹಾಗೂ ಚೇತನ್ ಬುಳ್ಳ ಎಂಬವರ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿ ಶಿವ ಕರ್ಬಿಂಸ್ಥಾನ ಎಂಬಾತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ, ಶಾನು ಶೆಟ್ಟಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶರಣ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಂಡ ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.