March 19, 2026
WhatsApp Image 2024-01-25 at 10.06.49 AM

ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ಹಾಡಹಗಲೇ ಸಾರ್ವಜನಿಕ ರಸ್ತೆಯ ಬದಿ ಕಾರಿನೊಳಗೆ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ- ಯುವತಿಗೆ ಬುದ್ದಿ ಹೇಳಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಉಪಕಾರ ಲೇಔಟ್‌ನ ಮೂರನೇ ಮುಖ್ಯ ರಸ್ತೆಯ 3ನೇ ಅಡ್ಡರಸ್ತೆಯ ಊರ್ವ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಪಶ್ಚಿಮ ವಿಭಾಗದ ರಿಸರ್ವ್ ಸಬ್ ಇನ್‌ಸ್ಪೆಕ್ಟರ್ ಕೆ.ಮಹೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತ ಜೋಡಿಯ ವಿರುದ್ದ ಕೊಲೆಗೆ ಯತ್ನ ಪ್ರಕರಣ ದಾಖಲಿಸಿ ಪತ್ತೆಗೆ ಶೋಧಿಸಲಾಗುತ್ತಿದೆ.

ಘಟನೆ ವಿವರ: ಉಪಕಾರ ಲೇಔಟ್ ನಿವಾಸಿ ಆರ್‌ಎಸ್‌ಐ ಮಹೇಶ್ ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಊಟ ಮುಗಿಸಿ ವಾಕಿಂಗ್ ಮಾಡಲು ಮನೆ ಎದುರಿನ ರಸ್ತೆಗೆ ಬಂದಿದ್ದಾರೆ.ಈ ವೇಳೆ ರಸ್ತೆಯ ಎಡಬದಿ ಬಿಳಿ ಬಣ್ಣದ ಕಾರೊಂದು ನಿಂತಿರುವುದು ಕಂಡು ಬಂದಿದೆ. ಏಳೆಂಟು ಹೆಜ್ಜೆ ಮುಂದೆ ಹೋಗಿ ಬಳಿಕ ಹಿಂದಿರುಗಿ ನೋಡಿದಾಗ ಆ ಕಾರಿನ ಹಿಂಬದಿ ಆಸನದಲ್ಲಿ ಯುವಕ-ಯುವತಿ ವಿವಸ್ತ್ರರಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದಿದೆ.

ಕಾರು ಹತ್ತಿಸಲು ಯತ್ನ: ಸಾರ್ವಜನಿಕ ರಸ್ತೆಯಲ್ಲಿ ಹಲವರು ವಾಕಿಂಗ್‌ಗೆ ಬರುವುದರಿಂದ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಯುವ ಜೋಡಿಗೆ ತಿಳಿ ಹೇಳಲು ಮಹೇಶ್ ಕಾರಿನ ಮುಂಭಾಗಕ್ಕೆ ಬಂದು ನೋಂದಣಿ ಸಂಖ್ಯೆ ನೋಡಲು ಕೆಳಗೆ ಬರಿದ್ದಾರೆ ಆಗ ಕಾರಿನ ಹಿಂಬದಿ ಸೀಟಿನಲ್ಲಿದ್ದ ಯುವಕ ಚಾಲಕನ ಸೀಟಿಗೆ ಬಂದು ಏಕಾಏಕಿ ಕಾರು ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸಿ ಮಹೇಶ್ ಮೇಲೆ ಹತ್ತಿಸಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಿ ಮಹೇಶ್ ಎಚ್ಚೆತ್ತುಕೊಂಡು ತಕ್ಷಣ ಕಾರಿನ ಬಾನೆಟ್ ಮೇಲೆ ಜಿಗಿದು ಬಿಗಿಯಾಗಿ ಹಿಡಿದುಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.