ಉಡುಪಿ: ವಾಹನ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಬೈಕೊಂದು ಅಫಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯ ಬಳಿ ಗುರುವಾರ ನಡೆದಿದೆ

ಮೃತ ಬೈಕ್ ಸವಾರನನ್ನು ದರ್ಶನ್ (24 ) ಎಂದು ಗುರುತಿಸಲಾಗಿದೆ. ಮೂಲತಃ ಕಾರವಾರದವರಾದ ದರ್ಶನ್ ಅವರು ಕಟಪಾಡಿ ಸಮೀಪದ ಶಂಕರಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು ಎನ್ನಲಾಗಿದೆ.  ಕೆಲವೇ ದಿನಗಳ ಹಿಂದೆ ಇದೇ ಯುವಕ ಬೈಕ್ ಅಫಘಾತದಲ್ಲಿ ಕೈ ಮೂಳೆ ಮುರಿತಕ್ಕೆ ಒಳಗಾಗಿ ಮನೆಯಲ್ಲಿದ್ದರು ಅನ್ನುವ ಮಾಹಿತಿ ಇದೆ. ಇನ್ನು ಯಾವುದೋ ಅಪರಿಚಿತ ವಾಹನ ಈತನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡಿದ್ದರಿಂದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.