ಬಂಟ್ವಾಳ: ಬಸ್‌ ಟಯರ್ ಬ್ಲಾಸ್ಟ್‌- ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಡಿಕ್ಕಿ..!

ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿದೆ.

ಅದೃಷ್ಟವಶಾತ್ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಬಂದಿದ್ದ ಪ್ರಯಾಣಿಕರು ಅಂಗಡಿಗೆ ಹೋಗಿದ್ದರಿಂದ ಸೇಫ್ ಆಗಿದ್ದಾರೆ. ಬಳಿಕ ಬಸ್ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಸಂಚಾರಿ ಪೊಲೀಸರು ಸ್ತಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.