
ಉಡುಪಿ: ರಸ್ತೆ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ವಾಹನ ಏಕಾಏಕಿಯಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸೂಪರ್ ವೈಸರ್ ಮೃತಪಟ್ಟಿದ್ದಾರೆ
ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯನ್ನು ನಿರ್ವಹಿಸುತ್ತಿರುವಾಗ ಹೊಸ ಸಿಮೆಂಟ್ ಮಿಕ್ಸರ್ ವಾಹನ ಹಿಂದಕ್ಕೆ ಚಲಾಯಿಸಿದ್ದು ಆ ವೇಳೆ ರಸ್ತೆಯಲ್ಲಿ ನಿಂತಿದ್ದ ಕಂಪನಿಯ ಸೂಪರವೈಸರ್ ಆದ ಭಾಷಿ ವೈ ಎನ್ನುವವರಿಗೆ ಡಿಕ್ಕಿ ಹೊಡೆದಿದೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 11/2024 ಕಲಂ: 279 , 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
