ಉಡುಪಿ: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ: ಮಾ.13ಕ್ಕೆ ಚೌಗುಲೆ ನ್ಯಾಯಾಲಯಕ್ಕೆ ಹಾಜರು?

ಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಗುರುವಾರ ಆಪಾದನೆ ಪೂರ್ವ ವಿಚಾರಣೆ ನಡೆದಿದ್ದು, ಆರೋಪಿ ಮೇಲೆೆ ಆಪಾದನೆ ವಾಚಿಸುವ ಪ್ರಕ್ರಿಯೆಯನ್ನು ಮಾ.13ಕ್ಕೆ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸದೆ ನೇರವಾಗಿ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ನೇಮಕಾತಿ ಪತ್ರದೊಂದಿಗೆ . ಹಾಜರಾತಿ ಪ್ರಮಾಣಪತ್ರ(ಮೆಮೊ ಫೆಟರೇಷನ್) ವನ್ನು ನ್ಯಾಯಾಲಯಕ್ಕ ಸಲ್ಲಿಸಿದರು. ಆರೋಪಿ ಪರವಾಗಿ ನ್ಯಾಯವಾದಿ ರಾಜೇಶ್ ನ್ಯಾಯಾಲಯದಲ್ಲಿ ವಕಾಲತ್ತು ಹಾಕಿದರು.

ಆಪಾದನೆ(ಚಾರ್ಜ್) ಪೂರ್ವ ವಿಚಾರಣೆ ನಡೆಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷಾಧಾರಗಳಿವೆ ಎಂದು ತೀರ್ಮಾನಿಸಿ ಮಾ.13ರಂದು ಚಾರ್ಜ್ ದಿನ ನಿಗದಿಪಡಿಸಿ ಆದೇಶಿಸಿದರು. ಅಂದು ಬೆಂಗಳೂರು ಜೈಲಿನಲ್ಲಿರುವ ಆರೋಪಿಯನ್ನು ಉಡುಪಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದರು.

Check Also

ರುಚಿಕರವಾದ ಮಟನ್​ ಬಿರಿಯಾನಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ …

Leave a Reply

Your email address will not be published. Required fields are marked *

You cannot copy content of this page.