ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಭೇಟಿ

ಮಂಗಳೂರು : ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಭೇಟಿ‌ ನೀಡಿದ ಸ್ಯಾಂಡಲ್ ವುಡ್ ನಟ ದರ್ಶನ್ ಕೊರಗಜ್ಜ ದೈವದ ದರ್ಶನ ಪಡೆದರು. ಈ ವೇಳೆ ಕುತ್ತಾರು ಕೊರಗಜ್ಜನ ಕ್ಷೇತ್ರದ ವತಿಯಿಂದ ನಟ ದರ್ಶನ್ ಗೆ ಗೌರವ ಸಲ್ಲಿಕೆ ನಡೆಯಿತು. ಬಳಿಕ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ನಾನು ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಈ ಹಿಂದೆ ನಾನು ಮಂಗಳೂರಿಗೆ ಬಹಳ ಸಲ ಬಂದಿದ್ದೆ. ಆದರೆ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಆದ್ದರಿಂದ ಈ ಕ್ಷೇತ್ರವನ್ನೊಮ್ಮೆ ನೋಡಿಕೊಂಡು ಹೋಗೋಣ ಎಂದು ಬಂದಿದ್ದೇನೆ. ಸಂಸದೆ ಸುಮಲತಾ ಬೆಂಬಲ ವಿಚಾರದ ಬಗ್ಗೆ ಮಾತನಾಡಿದ ದರ್ಶನ್, ಅಮ್ಮ ಅಮ್ಮನೇ. ನಾವು ಅವಳೊಂದಿಗೆನೇ‌ ಇರೋದು. ಬೇರೆಯವರಿಗಾಗಿ ಅಮ್ಮನನ್ನು ಬಿಡೋಕಾಗುತ್ತಾ? ಎಂದು ಪರೋಕ್ಷವಾಗಿ ಸಂಸದೆ ಸುಮಲತಾ ಬೆಂಬಲಿಸುವ ಹೇಳಿಕೆ ನೀಡಿದರು.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.