ಉಡುಪಿ: ಲೋಕಸಬಾ ಚುನಾವಣೆ ನಿಮಿತ್ತ ಉದ್ಯಾವರದ ಚೆಕ್ಪೋಸ್ಟ್ ಬಳಿ ಅಕ್ರಮವಾಗಿ ನಗದು ಸಾಗಾಟ ಮಾಡುತ್ತಿದ್ದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲ.ರೂ.ಗಳಂತೆ ಒಟ್ಟು 7 ಲ.ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿತ್ತು. ಮತ್ತೊಂದು ಕಾರು ಮಂಗಳೂರಿನಿಂದ ಉಡುಪಿಯತ್ತ ಬರುತ್ತಿತ್ತು. ಸೂಕ್ತ ದಾಖಲಾತಿ ಇಲ್ಲದ ಕಾರಣ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Check Also
ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ
ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …