ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನಾಲ್ಕೂರು ಗ್ರಾಮದ ಕಪೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಹಾಗೂ ಕೊಲೆ ಮಾಡಿದ ಆರೋಪಿ ಮೃತರ ತಮ್ಮ ವಿಶ್ವನಾಥ್ (30) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Check Also
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..
ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …