ಮಂಗಳೂರು: ನಗರ ಮೋರ್ಗನ್ ಗೇಟ್ ಬಳಿಯ ರೈಲ್ವೇ ಟ್ರಾಕ್ ಪಕ್ಕದಲ್ಲಿ ವಾಕಿಂಗ್ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರು ನಡೆದಿದೆ. ನಾಪತ್ತೆಯಾದ ಯುವಕ ವೈದ್ಯನಾಥ ನಗರದ ನಿವಾಸಿ ವಿಕಾಸ್(26 ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿಯೊಂದಿಗೆ ಮನೆಯಿಂದ ಶುಕ್ರವಾರ ಸಂಜೆ ವಾಕಿಂಗ್ ತೆರಳಿದವರು ವಾಪಸ್ ಬಂದಿಲ್ಲ. ಈ ಬಗ್ಗೆ ಆತನ ತಾಯಿ ಸೀತಾ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Check Also
ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ
ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …