ಕಾರ್ಕಳ: ಟೆರೇಸಿನಲ್ಲಿ ಮಲಗಿದ್ದ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಸಾವು

ಅಜೆಕಾರು: ಸೆಖೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸಿನಲ್ಲಿ ಮಲಗಿದ್ದ ಎಣ್ಣೆಹೊಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅಜೆಕಾರು ಬೊಂಡುಕುಮೇರಿ ಆಶ್ರಯ ನಗರ ನಿವಾಸಿ ಸುಂದರ್‌ ನಾಯ್ಕ (55) ಮೃತ ಶಿಕ್ಷಕ. ಅವರು ರಾತ್ರಿ ಸುಮಾರು 10.30ರ ವೇಳೆಗೆ ಟೆರೇಸಿನಲ್ಲಿ ಮಲಗಿದ್ದರು.

ಬೆಳಗ್ಗೆ 6.30ರ ವೇಳೆಗೆ ಮನೆಯವರು ನೋಡುವಾಗ ಕೆಳಗೆ ಬಿದ್ದು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರಿಯರನ್ನು ಅಗಲಿದ್ದಾರೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.