ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯ ಖಾತೆಯಿಂದ ಲಕ್ಷಾಂತರ ರೂ. ಎಗರಿಸಿದ ಸೈಬರ್ ಕಳ್ಳರು!

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ.

ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು.

ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.