![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಕಲಬುರಗಿ: ಯಾತ್ರೆಗೆ ತೆರಳಿದ್ದ ವೇಳೆ ಟಿಟಿ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ನಗರದ ಮೂವರು ಮೃತಪಟ್ಟ ಘಟನೆ ಅಯೋಧ್ಯೆಯಲ್ಲಿ ನಡೆದಿದೆ.
ಮೃತರನ್ನು ಕಲಬುರಗಿಯ ಶಿವರಾಜ್, ಕಾಶಿನಾಥ್ ಮತ್ತು ತಂಗೆಮ್ಮ ಎಂದು ಗುರುತಿಸಲಾಗಿದೆ. ನಗರದ 22 ಜನರು ಕುಟುಂಬ ಸಮೇತರಾಗಿ ಯಾತ್ರೆಗೆ ತೆರಳಿದ್ದರು.
ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಅಯೋದ್ಯೆಗೆ ಹೊರಟಿದ್ದರು. ಈ ವೇಳೆ ಅಯೋದ್ಯೆಯ ಪ್ರಯಾಗ್ ರಾಜ್ ಹೈವೇಯಲ್ಲಿ ಲಾರಿ ಹಾಗೂ ಟಿಟಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.