October 18, 2024
WhatsApp Image 2024-06-10 at 9.21.38 AM

ಮಂಗಳೂರು : ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ರವಿವಾರ ರಾತ್ರಿ ಚೂರಿ ಇರಿದ ಘಟನೆ ಮಂಗಳೂರು ನಗರದ ಮುಡಿಪು ಸಮೀಪದ ಬೋಳಿಯಾರು ಎಂಬಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41) ಹಾಗೂ ನಂದಕುಮಾರ್ (24 ವರ್ಷ) ಚೂರಿ ಇರಿತಕ್ಕೆ ಒಳಗಾದವರು. ಇನ್ನೋಳಿ‌ ನಿವಾಸಿ ಕೃಷ್ಣ ಕುಮಾರ್ ಎಂಬವರು ಹಲ್ಲೆಗೊಳಗಾಗಿದ್ದಾರೆ. ನಿನ್ನೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿ ಪದಗ್ರಹಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಬೊಳಿಯಾರು ಮಸೀದಿಯ ಮುಂಭಾಗ ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ವಿಜಯೋತ್ಸವದ ಬಳಿಕ ಕೆಲ ಬೈಕ್‌ಗಳಲ್ಲಿ 20-25 ಅನ್ಯಕೋಮಿನ ಯುವಕರ ತಂಡ ಅವರನ್ನು ಹಿಂಬಾಲಿಸಿದೆ. ಈ ವೇಳೆ ಎರಡೂ ತಂಡಗಳ ನಡುವೆ ವಾಗ್ವಾದ ನಡೆದಿದೆ. ಅಲ್ಲಿ ಅನ್ಯಕೋಮಿನ ಯುವಕರ ತಂಡ ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರು ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.