ಪ್ರಿಯತಮೆಯನ್ನ ಭೀಕರವಾಗಿ ಹತ್ಯೆಗೈದು, ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ.

ಹೇಮಾವತಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಇದ್ದು ಹೋಗುತ್ತಿದ್ದ. ಆದರೆ ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಅಲ್ಲಿಂದ ಪರಾರಿಯಾಗಿದ್ದಾನೆ.ಚಿಂತಾಮಣಿಗೆ ಹೋಗಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಾನೆ ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …

Leave a Reply

Your email address will not be published. Required fields are marked *

You cannot copy content of this page.