ದೇವರಿಗೆ ಪ್ರಸಾದ ತಯಾರಿಸಲು ಹೋದಾಗ ಅಗ್ನಿ ಅವಘಡ; ಗಂಭೀರ ಗಾಯಗೊಂಡ ಅರ್ಚಕ ಸಾವು

ಬೆಂಗಳೂರು: ಪ್ರಸಾದ ತಯಾರಿಸುವ ವೇಳೆ ಅಗ್ನಿ ಅವಘಡ ಸಂಭವಿಸಿ ಅರ್ಚಕ‌ರೊಬ್ಬರು ಮೃತಪಟ್ಟಿದ್ದಾರೆ. ಜಯನಗರ ನಾಲ್ಕನೇ ಬ್ಲಾಕ್‌ನಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿದ್ದ ನಾಗಯ್ಯ ಸಿ. (61) ಮೃತರು.

ನವೆಂಬರ್‌ 18 ರಂದು ಎಂದಿನಂತೆ ಬೆಳಗ್ಗೆ ದೇವಸ್ಥಾನಕ್ಕೆ ಹೋಗಿದ್ದ ನಾಗಯ್ಯ ಅವರು, ದೇವಸ್ಥಾನದ ಹಿಂಭಾಗದ ಕೋಣೆಯಲ್ಲಿ ಪ್ರಸಾದ ಮಾಡಲು ಹೋಗಿದ್ದರು.

ಈ ವೇಳೆ ಗ್ಯಾಸ್ ಆನ್ ಮಾಡಿ ಲೈಟರ್ ಹುಡುಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕಟ್ಟಡದ ಮೇಲ್ಭಾಗದ ರೂಂನಲ್ಲಿದ್ದ ಬೆಂಕಿಪೊಟ್ಟಣ ತೆಗೆದುಕೊಂಡು ಬರಲು ಹೋಗಿದ್ದಾರೆ. ಗ್ಯಾಸ್‌ ಸ್ಟೌ ಆನ್‌ ಮಾಡಿರುವುದನ್ನು ಮರೆತು ಹೋಗಿದ್ದು, ಅಷ್ಟರಲ್ಲಿ ಗ್ಯಾಸ್ ಲೀಕ್ ಆಗಿದೆ.

ಈ ಬಗ್ಗೆ ಗಮನಕೊಡದ ಅರ್ಚಕ ನಾಗಯ್ಯ ಏಕಾಏಕಿ ಕಡ್ಡಿ ಗೀರಿದ್ದಾರೆ. ಹೀಗಾಗಿ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಅರ್ಚಕರನ್ನು ಕೂಡಲೇ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನ.23ರಂದು ಮೃತಪಟ್ಟಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.