ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್.ರಾಹುಲ್ ಭಾಗಿ

ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ಹಾಗೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿ ದೈವದ ಕೃಪೆಗೆ ಪಾತ್ರರಾದರು. ಬಾಲಿವುಡ್ ನಟಿ ಕತ್ರಿನಾ ಕೈಫ್, ಅವರ ಪತಿ ನಟ ವಿಕ್ಕಿ ಕೌಶಲ್, ಕ್ರಿಕೆಟಿಗ ಕೆ.ಎಲ್ .ರಾಹುಲ್, ಅವರ ಪತ್ನಿ ನಟಿ ಆಥಿಯಾ ಶೆಟ್ಟಿ, ನಟ ಅಹನ್ ಶೆಟ್ಟಿ ಸೇರಿದಂತೆ ಮ್ಯಾಟ್ರಿಕ್ಸ್ ಎಂಟರ್​ಟೈನ್​ಮೆಂಟ್​ನ ರೇಷ್ಮಾ ಶೆಟ್ಟಿ ಹಾಗೂ ವಿ.ಎಂ.ಕಾಮತ್ ಸೇರಿದಂತೆ ಒಟ್ಟು 9 ಮಂದಿಯ ಹೆಸರನ್ನು ಎರಡು ತಿಂಗಳ ಹಿಂದೆಯೇ ಕುತ್ತಾರು ಕ್ಷೇತ್ರದ ಕಟ್ಟೆಯಲ್ಲಿ ಹರಕೆಯ ಕೋಲ ಸಲ್ಲಿಸುವ ಭಕ್ತರು ಬರೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಹರಕೆಯ ಕೋಲ ನಡೆದಿದ್ದು, ವಿಕ್ಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಭಾಗಿಯಾಗಿದ್ದರು. ಕ್ಷೇತ್ರದ ಸಂಪ್ರದಾಯದಂತೆ ಸಂಜೆ 7ಗಂಟೆಯ ಬಳಿಕ ಮಹಿಳೆಯರು ಕೊರಗಜ್ಜನ ಕಟ್ಟೆಯ ಆವರಣದಲ್ಲಿ ಇರುವಂತಿಲ್ಲ. ಆದ್ದರಿಂದ ಕತ್ರಿನಾ ಕೈಫ್, ರೇಷ್ಮಾ ಶೆಟ್ಟಿ, ಆಥಿಯಾ ಶೆಟ್ಟಿ ಕೋಲ ನಡೆಯುವ ಸಂದರ್ಭ ಹೊರಗುಳಿದು ಕಚೇರಿಯಲ್ಲಿ ಕುಳಿತಿದ್ದರು. ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅಹಾನ್ ಶೆಟ್ಟಿ ಮಾತ್ರ ಕೋಲದಲ್ಲಿ ಭಾಗಿಯಾಗಿದ್ದರು. ವಿಶೇಷವೆಂದರೆ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆಯುವ ಈ ಕೋಲವನ್ನು ಮಹಿಳೆಯರು ಹೊರಗಡೆಯೇ ನಿಂತು ಧನ್ಯತಾ ಭಾವ ಅನುಭವಿಸಿದರು. ಸಂಜೆ 6ಗಂಟೆ ವೇಳೆಗೆ ಬಾಲಿವುಡ್ ನಟ, ನಟಿಯರು, ಕ್ರಿಕೆಟಿಗ ಕೆ.ಎಲ್.ರಾಹುಲ್ ಕುತ್ತಾರಿಗೆ ಆಗಮಿಸಿದ್ದರು. ಕೊರಗಜ್ಜನ ಕಟ್ಟೆಯೊಳಗೆ ಫೋಟೊ, ವೀಡಿಯೋ ನಿಷೇಧವಿದ್ದು, ಸ್ಥಳದಲ್ಲಿ ಫೋಟೊ ತೆಗೆಯದಂತೆ ವಿನಂತಿ ಮಾಡಲಾಗಿತ್ತು. ಫೋಟೊ, ವೀಡಿಯೋ ತೆಗೆದವರನ್ನು ಡಿಲಿಟ್​ ಮಾಡುವಂತೆ ಕೋರಲಾಗಿತ್ತು.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.