October 18, 2024
accident11-7

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.

ಇನ್ನು ಕೆಲ ದಿನಗಳ ಹಿಂದೆ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಹೊನ್ನಾಳಿ ಸಮೀಪದ ಕಾಲುವೆಯೊಂದರಲ್ಲಿ ಕಾರು ಬಿದ್ದು ಮೃತಪಟ್ಟಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.