ದೈವಾರಾಧನೆ ಕುರಿತ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧ – ದೈವಾರಾಧಕರ ಎಚ್ಚರಿಕೆ

ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನಾ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಲಾಗಿವೆ. ಇಂದು ಮಂಗಳೂರಿನ ಕುತ್ತಾರು ಬಳಿಯ ಕೊರಗಜ್ಜನ ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಮಿತಿಗಳು ಸಲ್ಲಿಸಿದವು. ಈ ಸಂದರ್ಭದಲ್ಲಿಯೇ ದೈವಾರಾಧಕರು ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವುದು ಸರಿಯಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.