ಸಮುದ್ರ ತೀರದಲ್ಲಿ ಗೋವಿನ ಅವಶೇಷ – ಹಿಂದೂ ಸಂಘಟನೆಗಳಿಂದ ಆಕ್ರೋಶ

ಕುಂದಾಪುರ: ಗಂಗೊಳ್ಳಿಯ ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿಯ ಕಡಲ ತೀರದಲ್ಲಿ ಗೋಣೆ ಚೀಲದಲ್ಲಿ ದನದ ಅವಶೇ? ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪದೇ ಪದೇ ಗೋವನ್ನು ಕಳ್ಳತನ ಮಡಿ, ಗೋವನ್ನು ವಧೆ ಮಾಡಿ ಅವರ ಕಳೆಬರವನ್ನು ಸಮುದ್ರ ಹಾಗೂ ನದಿಯಲ್ಲಿ ಎಸೆದು ವಿಕೃತಿ ಮೆರೆದು ಹಿಂದುಗಳ ಭಾವನೆಗೆ ನೋವುಂಟು ಮಾಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹಿಂದು ಪರ ಸಂಘಟನೆಗಳು ಆಗ್ರಹಿಸಿವೆ. ಈ ಬಗ್ಗೆ ಮೋಹನ್ ಎಂಬುವರು ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್‌ಗೆ ದಾಖಲು

ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು …

Leave a Reply

Your email address will not be published. Required fields are marked *

You cannot copy content of this page.