ಉಡುಪಿ: ಬ್ಯಾಂಕ್ನ ಕಸ್ಟಮರ್ ಕೇರ್ ಎಂದು ನಂಬಿಸಿ ಮಾಹಿತಿ ಪಡೆದು ವ್ಯಕ್ತಿಯೊಬ್ಬರ ಖಾತೆಯಿಂದ ಸಾವಿರಾರು ರೂ. ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಸಂಭವಿಸಿದೆ. ಮಣಿಪಾಲದ ಶೇಖ್ ಅಬ್ದುಲ್ ಖಾದರ್ ಅವರು ಅಮೆಜಾನ್ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ಐಸಿಐಸಿಐ ಬ್ಯಾಂಕ್ ಕಸ್ಟಮರ್ ಕೇರ್ ಸೆಂಟರ್ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದ. ನಂತರ ನಿಮ್ಮ ಕಾರ್ಡ್ ಬದಲಾವಣೆ ಮಾಡಲಿಕ್ಕಿದೆ’ ಎಂದು ಮಾಹಿತಿ ಪಡೆದುಕೊಂಡ ಸ್ವಲ್ಪ ಸಮಯದಲ್ಲೇ ಕ್ರೆಡಿಟ್ ಕಾರ್ಡ್ನಿಂದ 51,180 ರೂ. ಮತ್ತೂಂದು ಅಕೌಂಟ್ಗೆ ವರ್ಗಾವಣೆಯಾಗಿದೆ. ಸದ್ಯ ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …