ಉಡುಪಿ: ನಗರಸಭೆ ಪೌರಕಾರ್ಮಿಕ ಆತ್ಮಹತ್ಯೆಗೆ ಶರಣು

ಉಡುಪಿ: ಗುತ್ತಿಗೆ ಆಧಾರದಲ್ಲಿ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕ ತನ್ನಿ (39) ಎಂಬುವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಪುತ್ತೂರು ಕದ್ಮಲ್ ರಂಗರಾವ್ ರಸ್ತೆಯಲ್ಲಿ ಸಂಭವಿಸಿದೆ. ನಗರ ಪೋಲಿಸ್ ಠಾಣೆಯ ಸುರೇಶ್ ಕೆ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ದೇಹವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ಎಂದಿನಂತೆ ನೆರವಾದರು. ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Check Also

ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್‌ಗೆ ದಾಖಲು

ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು …

Leave a Reply

Your email address will not be published. Required fields are marked *

You cannot copy content of this page.