ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

ಪುತ್ತೂರು: ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು.

ವಿದ್ಯಾರ್ಥಿನಿಯನ್ನು ಸಂಸ್ಥೆಯಿಂದ ವಜಾಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಪಿ ಎಂದು ಬಾಲಕನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ.

ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಸಭೆ ನಡೆಸಿದ್ದು, ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯು ಅದೇ ಕಾಲೇಜಿನ ವಿದ್ಯಾರ್ಥಿಯ ಮೇಲೆ ಸುಳ್ಳು ಆರೋಪ ಹೊರಿಸಿರುವುದನ್ನು ಖಂಡಿಸಿದರು. ಈ ಸಭೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಬೇಕು ಮತ್ತು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಆತನ ಹೆಸರನ್ನು ಕೆಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾಳೆ. ಬಾಲಕಿಯ ವಿಚಾರಣೆ ಬಳಿಕವಷ್ಟೇ ಸತ್ಯ ಹೊರಬೀಳಲಿದೆ. ವಿಚಾರಣೆ ಪೂರ್ಣಗೊಂಡ ನಂತರ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.