ಉಡುಪಿ ಮಠಕ್ಕೂ ಬಂದು ಹೋಗಿದ್ದ ಶಾರೀಖ್ : ದೇವಾಲಯದ ಸುತ್ತಮುತ್ತ ಬಿಗಿಭದ್ರತೆ

ಮಂಗಳೂರು : ಮಂಗಳೂರು ಆಟೋ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಇತ್ತೀಚೆಗೆ ಉಡುಪಿ ಮಠಕ್ಕೆ ಕೂಡ ಬಂದಿದ್ದನು ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಅಕ್ಟೋಬರ್ 16 ರಂದು ಉಡುಪಿಯ ಕಾರ್ ಸ್ಟ್ರೀಟ್ ಪ್ರದೇಶಕ್ಕೆ ಬಂದು ಕಾರ್ಕಳ ಮತ್ತು ಬಂಟ್ವಾಳಕ್ಕೆ ಪ್ರಯಾಣ ಬೆಳೆಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಕೃಷ್ಣಮಠದ ಕಾರ್ ಸ್ಟ್ರೀಟ್ ಪ್ರದೇಶದ ಅಂಗಡಿಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಶಾರೀಖ್ ಉಡುಪಿ ಮಠಕ್ಕೆ ಬಂದು ಹೋಗಿರುವ ಕುರಿತು ಗೊತ್ತಾಗಿದೆ. ಅಕ್ಟೋಬರ್ 16 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಕೃಷ್ಣ ಮಠ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Check Also

ಉಡುಪಿ: ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ …

Leave a Reply

Your email address will not be published. Required fields are marked *

You cannot copy content of this page.