ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಆಭರಣದ ಅಂಗಡಿಯಲ್ಲಿ ಚಿನ್ನದ ಸರ ಕಳವು..!

ಉಡುಪಿ:  ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು‌ ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ  ಬಿ.ಸತ್ಯನಾರಾಯಣ ಶೇಟ್‌ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇವರು ಕನಕದಾಸ ರಸ್ತೆಯಲ್ಲಿ ಪಾಂಡುರಂಗ ಜುವೆಲ್ಲರ್ಸ್‌ ಎಂಬ ಆಭರಣದ ಅಂಗಡಿ ನಡೆಸುತ್ತಿದ್ದಾರೆ. ಇವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಪುರುಷ ಬಂದಿದ್ದು, ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಕಳವಾದ ಚಿನ್ನದ ಸರದ ಮೌಲ್ಯ 22 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಹತ್ರಸ್ ಸತ್ಸಂಗ ಕಾಲ್ತುಳಿತ ದುರಂತ: ಮೃತದೇಹಗಳನ್ನು ಕಂಡು ಪೊಲೀಸ್ ಪೇದೆಗೆ ಹೃದಯಾಘಾತ

ದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ವೇಳೆ ನೂಕುನುಗ್ಗಲು ಉಂಟಾಗಿ ಸ್ಥಳದಲ್ಲಿ ಬಿದ್ದಿದ್ದ 100ಕ್ಕೂ ಹೆಚ್ಚು ಮೃತ ದೇಹಗಳನ್ನು …

Leave a Reply

Your email address will not be published. Required fields are marked *

You cannot copy content of this page.