March 13, 2026
WhatsApp Image 2025-02-06 at 10.21.53 AM

ಕೋಟ:ಕಲ್ಲು ಕೋರೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ ಸಿಬಂದಿ ವಿರುದ್ಧ ಎಸ್‌ಪಿ ಕ್ರಮ ಕೈಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೇದೆ ಸಂತೋಷ್ ಅವರನ್ನು ಅಮಾನತುಗೊಳಿಸಲಾಗಿದ್ದು, ಪಿ.ಎಸ್.ಐ. ಅಶೋಕ್‌ ಅವರನ್ನು ಒಒಡಿ ಮೇಲೆ ಪಡುಬಿದ್ರಿ ಠಾಣೆಗೆ ವರ್ಗಾಯಿಸಲಾಗಿದೆ.ಗರಿಕೆಮಠದ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆಯುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕ ಸೆಂಥಿಲ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿಮಹಮ್ಮದ್ ಬಶೀರ್ ಅವರು ಒಂದು ಎಕ್ರೆ ವಿಸ್ತೀರ್ಣದ ತಮ್ಮ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿದ್ದು ತಿಳಿದುಬಂದಿತ್ತು.

ಬಳಿಕ ಗರಿಕೆಮಠ ನಿವಾಸಿ, ಕಲ್ಲುಕೋರೆ ಕಾರ್ಮಿಕ ರಾಜು ಎಂಬಾತನನ್ನು ಸ್ಫೋಟಕ್ಕೆ ಮದ್ದುಗಳನ್ನು ಬಳಸಲು ಸಹಕಾರ ನೀಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮುಖ್ಯ ಆರೋಪಿ ಬಶೀರ್‌ನನ್ನು ಬಂಧಿಸಲು ತೆರಳಿದ ಸಂದರ್ಭದಲ್ಲಿ ಆತ ಪೊಲೀಸರ ಎದುರೇ ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ.

ಪ್ರಕರಣದ ವಿಚಾರಣೆ ಹಾಗೂ ಆರೋಪಿಗಳ ಬಂಧಿಸುವಲ್ಲಿ ಕರ್ತವ್ಯಲೋಪವಾಗಿದೆ ಎನ್ನುವ ನಿಟ್ಟಿನಲ್ಲಿ ಸಿಬಂದಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.