May 19, 2025 11:40:38 PM
WhatsApp Image 2025-03-15 at 11.48.22 AM

ಕಾರ್ಕಳ: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೇಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಕಾರ್ಕಳದ ಮಿಯ್ಯಾರಿನಲ್ಲಿ ನಡೆದಿದೆ. ಈ ಬಗ್ಗೆ ಇದೀಗ ದೂರು ದಾಖಲಾಗಿದೆ.

ಮಿಯ್ಯಾರು ಮಂಜಿರಾಯಿ ಕಂಬಳ ಬಳಿ ನಿವಾಸಿ ಹದಿನೆಂಟು ವರ್ಷದ ಅಮೂಲ್ಯ ನಾಪತ್ತೆಯಾದ ಯುವತಿಯಾಗಿದ್ದಾಳೆ. ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರಟು ಮನೆಗೂ ಬಾರದೆ, ಬ್ಯಾಂಕಿಗೂ ಹೋಗದೆ ನಾಪತ್ತೆಯಾಗಿದ್ದಾಳೆ.

ಆಕೆಯ ಮೊಬೈಲ್ ಗೆ ಕಾಲ್ ಮಾಡಿದಾಗ ತಾನು ಬೆಂಗಳೂರಿಗೆ ಹೋಗಿರುವುದಾಗಿ ತಿಳಿಸಿದ್ದು ನಂತರ ಯಾವುದೇ ಮಾಹಿತಿ ನೀಡಿಲ್ಲ. ಅವಳ ಪೋಷಕರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>