December 6, 2025
WhatsApp Image 2025-08-06 at 10.56.53 AM

ಹೆಬ್ರಿ: ಸ್ಥಳೀಯ ನಿವಾಸಿಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎಸ್. ಎನ್.ಸಿ ಗುತ್ತಿಗೆ ಸಂಸ್ಥೆಯ ಕ್ರೇನ್ ಹರಿದ ಪರಿಣಾಮ ವ್ಯಕ್ತಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಇಲ್ಲಿನ ಮುದ್ರಾಡಿ ಕೆಳಪೇಟೆಯಲ್ಲಿ  ಮಧ್ಯಾಹ್ನ ಸ್ಥಳೀಯರಾದ ಚಣಿಲ(65) ಎಂಬವರು ನಡೆದುಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತ ನಡೆದ ನಂತರ ಚಾಲಕ ಕ್ರೇನ್ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಸ್ಥಳೀಯರೆಲ್ಲ ಸೇರಿ ಅವನನ್ನು ತರಾಟೆಗೆ ತೆಗೆದುಕೊಂಡಾಗ ಬಳಿಕ ಸ್ವಲ್ಪ ದೂರದಲ್ಲಿ ಮುಂದೆ ಹೋಗಿ ಕ್ರೇನ್ ನಿಲ್ಲಿಸಿರುತ್ತಾನೆ.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕ್ರೇನ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.