December 6, 2025
WhatsApp Image 2025-08-22 at 5.49.25 PM

ಉಡುಪಿ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ಮೀನುಗಾರನೊಬ್ಬ ಸಾವನ್ನಪ್ಪಿದ ಘಟನೆ ಸಾಸ್ತಾನ ಕೋಡಿತಲೆ ಬಳಿ ನಡೆದಿದೆ.

ಮೃತರನ್ನು ಶರತ್ ಎಂದು ಗುರುತಿಸಲಾಗಿದೆ.

ಮೂವರು ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಬಲವಾದ ಅಲೆಗಳಿಂದಾಗಿ ಅವರ ದೋಣಿ ಮಗುಚಿ ಬಿದ್ದಿದೆ. ಮೂವರ ಪೈಕಿ ಇಬ್ಬರು ಮೀನುಗಾರರಾದ ಅಕ್ಷಯ್ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಸುರಕ್ಷಿತವಾಗಿ ಈಜಿ ದಡ ಸೇರಿದ್ದು, ಶರತ್ ಈ ದುರಂತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.