
ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಯುವತಿ ನಿರೀಕ್ಷಾಳನ್ನು ಬಂಧಿಸಲಾಗಿದೆ.
ಮಂಗಳೂರಿನಲ್ಲಿ ಯುವತಿ ನಿರೀಕ್ಷಾಳನ್ನು ಕದ್ರಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಭಿಷೇಕ್ ಹನಿ ಟ್ರ್ಯಾಪ್ ಗೆ ಒಳಪಡಿಸಿ ದುಡ್ಡಿಗಾಗಿ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ.
ಡೆತ್ ನೋಟ್ ನಲ್ಲಿ ಯುವತಿ ನಿರೀಕ್ಷಾ ಸೇರಿ 4 ಹೆಸರುಗಳನ್ನು ಉಲ್ಲೇಖಿಸಿದ್ದು, ಇದೀಗ ಯುವತಿಯನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
