March 4, 2026
WhatsApp Image 2025-11-14 at 10.41.33 AM

ಉಡುಪಿ ಕುಕ್ಕುಂಡಿ ಹೊಳೆಬಾಗಿಲು ಮಡಿಸಾಲು ಹೊಳೆಯಲ್ಲಿ ನ.10ರಂದು ಸಂಜೆ 4ಗಂಟೆಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ತಮ್ಮ ಮಗ ಶ್ರೀಶಾನ್ ಶೆಟ್ಟಿ (16) ಸಾವಿನಲ್ಲಿ ತಮಗೆ ಅನುಮಾನ ಇರುವುದಾಗಿ ಮೃತಪಟ್ಟ ಬಾಲಕನ ತಂದೆ ಪೆರ್ಡೂರು ಗ್ರಾದ ಕುಕ್ಕುಂಜಾರು ಅನಂತಪದ್ಮನಾಭ ನಿಲಯದ ಕರುಣಾಕರ ಶೆಟ್ಟಿ ದೂರು ನೀಡಿದ್ದಾರೆ.

ಹಿರಿಯಡಕ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಶ್ರೀಶಾನ್ ಶೆಟ್ಟಿ ನ.9ರಂದು ಅಪರಾಹ್ನ 12:15ಕ್ಕೆ ತಂದೆಯೊಂದಿಗೆ ಪೆರ್ಡೂರಿಗೆ ಹೋಗಿದ್ದು, ಅಲ್ಲಿಂದ ಅಜ್ಜಿ ಮನೆಯಾದ ಅಲಂಗಾರಿಗೆ ತೆರಳಿದ್ದ. ಅಲ್ಲಿಂದ ತಾನು ಪಕ್ಕದ ನದಿಗೆ ಆಟವಾಡಲು ಹೋಗುವುದಾಗಿ ತಂದೆಗೆ ಅಜ್ಜಿ ಮೊಬೈಲ್‌ನಿಂದ ಕರೆ ಮಾಡಿ ತಿಳಿಸಿದ್ದ. ಆದರೆ ಅಪರಾಹ್ನ 3ಗಂಟೆಯಾದರೂ ಮನೆಗೆ ಮರಳದಿದ್ದಾಗ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದ್ದರೂ ಆತ ಪತ್ತೆಯಾಗಿರಲಿಲ್ಲ. ಆತನನ್ನು ಯಾರೋ ಪುಸಲಾಯಿಸಿ, ಆಮಿಷ ತೋರಿಸಿ ಅಪಹರಣ ಮಾಡಿರಬೇಕು. ನವೀನ್ ಎಂಬವರ ಜೊತೆ ಆತ ಹೋಗಿರಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಶ್ರೀಶಾನ್‌ನ ಮೃತದೇಹ ಮರುದಿನ ಮಡಿಸಾಲು ಹೊಳೆಯಲ್ಲಿ ಪತ್ತೆಯಾಗಿತ್ತು. ಮಣಿಪಾಲ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿತ್ತು. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೃತ ತಂದೆ ನೀಡಿದ ದೂರಿನಲ್ಲಿ ತಿಳಿಸಿದಂತೆ ನವೀನ್ ಎಂಬಾತನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಮಣಿಪಾಲ ಕೆಎಂಸಿಯಿಂದ ಮರಣದ ವರದಿ ಹಾಗೂ ಎಫ್‌ಎಸ್‌ಎಲ್ ವರದಿ ಬಂದ ನಂತರ ಏನಾದರೂ ಕುರುಹು ಕಂಡುಬಂದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.