December 5, 2025
WhatsApp Image 2025-12-03 at 1.12.02 PM

ಉಡುಪಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅಭ್ಯಾಗತರಾಗಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ. ನ.8ರಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನಗೊಂಡ ಬೃಹತ್ ಗೀತೋತ್ಸವವು ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದಿದೆ ಎಂದು ಮಠದ ಪ್ರಕಟನೆ ತಿಳಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.