
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 60ಕ್ಕೂ ಅಧಿಕ ಮೊಬೈಲ್ ಫೋನ್ಗಳನ್ನು ವಾರೀಸುದಾರರಿಗೆ ಹಸ್ತಾಂತರ ಕಾರ್ಯಕ್ರಮವು ಉಡುಪಿ ನಗರ ಠಾಣೆಯ ಎದುರು ನಡೆಯಿತು.
ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ ಅವರು ವಾರೀಸುದಾರರಿಗೆ ಮೊಬೈಲ್ ಫೋನ್ಗಳನ್ನು ಹಸ್ತಾಂತರಿಸಿದರು. ಈ ವೇಳೆ ಉಡುಪಿ ನಗರ ಠಾಣಾ ಪಿಎಸ್ಐ ಭರತೇಶ್ ಕಂಕಣವಾಡಿ, ಗೋಪಾಲಕೃಷ್ಣ ಜೋಗಿ, ಬಶೀರ್, ಜೀವನ್, ವಿನಯ್ ಉಪಸ್ಥಿತರಿದ್ದರು.
