March 31, 2026
WhatsApp Image 2026-03-30 at 5.32.03 PM

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ.

ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

About The Author

Leave a Reply

Your email address will not be published. Required fields are marked *

You cannot copy content of this page.