May 26, 2026
WhatsApp Image 2026-05-26 at 12.15.10 PM

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 46ನೇ ವಾರ್ಷಿಕ ಮಹಾಸಭೆ ಮೇ ೩೧ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ ನಡೆಯುವ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮವನ್ನು ಅಖಿಲ ಭಾರತ ಗ್ರಾಹಕರ ಕಲ್ಯಾಣ ಪರಿಷತ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ. ಪಿ. ವರ್ಷ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಯೂರ್ ಉಳ್ಳಾಲ್, ಪುಂಡರೀಕಾಕ್ಷ ಯು., ಡಿ. ಚಂದಪ್ಪ ಮೂಲ್ಯ, ಸೋಮಯ್ಯ ಹನೈನಡೆ, ಸುಮಿತ್ ಸೊರ್ನಾಡು, ವಸಂತಿ ಭೋಜ ಸಾಲಿಯಾನ್ ಹಾಗೂ ಸುರೇಶ್ ಕುಮಾರ್ ನಾವೂರ ಭಾಗವಹಿಸಲಿದ್ದಾರೆ.

ಸಾಧಕರಿಗೆ ಗೌರವ

ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ಪಡೆದ ಜ್ಞಾನಶ್ರೀ ಅರಳ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ೪ನೇ ರ್‍ಯಾಂಕ್ ಪಡೆದ ಮನ್ವಿತಾ, ರಾಷ್ಟ್ರಮಟ್ಟದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ೧೦ನೇ ಸ್ಥಾನ ಪಡೆದ ಕೃತಿ ಎನ್.ಬಿ.ಪಿ. ಹಾಗೂ ಕರಾಟೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ ಕೆ. ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಸಹಕಾರಿ ಇಲಾಖೆಯಲ್ಲಿ ಸ್ವಯಂ ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಜಲಜಾಕ್ಷಿ ಕುಲಾಲ್ ಅವರಿಗೆ “ಕುಲಾಲ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಳಿಗ್ಗೆ ಪ್ರೇಮನಾಥ ನೇರಂಬೋಳು, ಕೃತಿಕ್ ಕುಮಾರ್ ವೈ.ಎಸ್. ಹಾಗೂ ವೈಷ್ಣವಿ ವೈ.ಕೆ. ಇವರಿಂದ ಗಾನ ಸಂಭ್ರಮ ಮತ್ತು ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಸಂಜೆ ಅಶ್ವಥ್ ಕುಲಾಲ್ ಮಂಜನಾಡಿ ನೇತೃತ್ವದಲ್ಲಿ ಕುಲಾಲ ಸಮಾಜ ಬಾಂಧವರಿಂದ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.