
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಪ್ರಮುಖ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ ಆಗಮಿಸಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸುವ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದಾರೆ.
ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದರಿಂದ, ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ಹಾಗೂ ರಾಜೀನಾಮೆ ವದಂತಿಗಳಿಗೆ ಇದೀಗ ಅಧಿಕೃತ ತೆರೆ ಬಿದ್ದಂತಾಗಿದೆ.
