![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಯ್ಯಪ್ಪ ಭಕ್ತರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಕಣಿವೆಗೆ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಥೇಣಿ ಜಿಲ್ಲೆಯ ಕುಮುಲಿ ಪರ್ವತ ಕಣಿವೆಯಲ್ಲಿ ಘೋರ ಘಟನೆ ನಡೆದಿದ್ದು, 40 ಅಡಿ ಆಳದ ಗುಂಡಿಗೆ ಕಾರು ಉರುಳಿಬಿದ್ದ ಪರಿಣಾಮ 8 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತೇನಿ ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ.