ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪ್ರಯಾಣಿಕರಿಗೆ ಗಾಯ

ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ.

ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ ಮೂಲಕ ಅಜೆಕಾರಿಗೆ ಬರುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಈ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.