October 18, 2024
WhatsApp Image 2023-01-05 at 3.12.17 PM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಹಾಕುವ ಪ್ಲ್ಯಾನ್‌ ಮಾಡಲಾಗುತ್ತಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ಇಡಲಾಗಿದೆ. ಇದ್ರ ಬೆನ್ನಲ್ಲೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಇಡಬೇಕು. ದೇಶ ಭಕ್ತರ ಫೋಟೋ ಹಾಕಬೇಕು. ಬಹುದೊಡ್ಡ ದಂಗಲ್‌ ಪ್ಲ್ಯಾನ್‌ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶಭಕ್ತರ ಫೋಟೋ ಹಾಕ್ಬೋದು ಪೋಟೋ ಹಾಕೋದ್ರಲ್ಲಿ ತಪ್ಪೇನಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಹೇಳಿದ್ದಾರೆ . ಶಿಕ್ಷಣ ಸಚಿವ ಹೇಳಿಕೆಯಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಹಾಕುವ ಬಗ್ಗೆ ನಿರ್ಧಾರ ತೆಗೆದುಕೊಂಡಿದೆಎಂಬ ಮಾಹಿತಿ ರವಾನೆಯಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ಹಾಕುವ ವಿಚಾರವಾಗಿ ಭಾರೀ ವಿರೋಧ ವ್ಯಕ್ತವಾಗಿತ್ತು ಇದೀಗ ಮತ್ತೆ ಶಾಲೆಗಳಲ್ಲೂ ಸಾವರ್ಕರ್‌ ಫೋಟೋ ಹಾಕುವ ಕುರಿತು ಎಲ್ಲರ ಗಮನಸೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳು ಹೋರಾಟ ಮಾಡುವ ಎಲ್ಲಾ ಸಾಧ್ಯತೆ ಇರಬಹುದು.

About The Author

Leave a Reply

Your email address will not be published. Required fields are marked *

You cannot copy content of this page.