ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 11ರಂದು ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ.

ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರ ದಂಡೇ ಸಮಾವೇಶಕ್ಕೆ ಆಗಮಿಸಲಿದೆ.

ದ.ಕ ಜಿಲ್ಲೆಯಾದ್ಯಂತ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೂ ಈ ಸಮಾವೇಶದಲ್ಲಿ ಆಗಮಿಸಲಿದ್ದು, ಬಿಜೆಪಿ ಚಾಣಕ್ಯ ಮುಂದಿನ ಚುನಾವಣೆಗಾಗಿ ರಣತಂತ್ರ ರೂಪಿಸಲಿದ್ದಾರೆ.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.