ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಮಂಗಳೂರು;ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದರ ಜೊತೆಗೆ ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ, ಕೆಎಸ್ ಆರ್ ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.