ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ.

ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.