ಬಂಟ್ವಾಳ: ಯುವಕನ ಕಿಡ್ನಾಪ್‌ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..!?

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ.

ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಯುವಕ ಸಮದ್ ಎಂಬಾತನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಸಲಿಂಗಕಾಮಿ ಆಟೋ ಚಾಲಕ ಅದ್ರಾಮ.?!ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಒಬ್ಬ ಕುಖ್ಯಾತ ಸಲಿಂಗಕಾಮಿ ಎನ್ನುವ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಹಲವು ಅಪ್ರಾಪ್ತ ಬಾಲಕರನ್ನು ಬಳಸಿ ಸಾರ್ವಜನಿಕವಾಗಿ ಒದೆ ತಿಂದಿದ್ದ.

ವಿಟ್ಲ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ @ ಸಮದ್ ಕೆಲ ದಿನಗಳ ನಾಪತ್ತೆಯಾಗಿದ್ದ. ರವಿವಾರ ರಾತ್ರಿ ವೇಳೆ ಯುವಕನನ್ನು ಕಿಡ್ನಾಪ್ ನಡೆಸಿದ್ದಾನೆ. ಬಳಿಕ ಮಂಚಿ ಇರಾ, ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಅದ್ರಾಮ.

ಆರೋಪಿಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.