ವಿಟ್ಲ: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!

ವಿಟ್ಲ : ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕು ವೀರಕಂಭ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾಗಿದ್ದ ಯುವತಿ. ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಜೂ.9 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಯುವತಿ ಮಂಗಳೂರಿನ ಪಿಜಿಯೊಂದರಲ್ಲಿ ಪತ್ತೆಯಾಗಿದ್ದು, ಪಾಂಡೇಶ್ವರ ಠಾಣೆಗೆ ಹಾಜರಾಗಿರುವುದಾಗಿ ತಿಳಿದು ಬಂದಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.