ಕಾರ್ಕಳ: ಜಗಳವಾಡಿ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದ ಪತಿ; ಇಬ್ಬರು ಕೂಡ ದುರ್ಮರಣ, ಅನಾಥರಾದ ಮಕ್ಕಳು

ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದು ಕೊನೆಗೆ ಸಾವಿನೊಂದಿಗೆ ಅಂತ್ಯ ಕಂಡಿರುವ ಹೃದಯ ವಿಧ್ರಾವಕ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40. ವ ) ಹಾಗೂ ಯಶೋಧಾ (32. ವ ) ಸಾವಿಗೀಡಾದ ದಂಪತಿ.

ಜೂ.25ರಂದು ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರುಪಾಲಾದರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಪುತ್ರ ಹಾಗೂ 9 ವರ್ಷದ ಪುತ್ರಿ ಅನಾಥರಾಗಿದ್ದಾರೆ.

ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.