ಬೆಳ್ತಂಗಡಿ: ಉಯ್ಯಾಲೆ ಹಗ್ಗ ಸಿಲುಕಿ ಬಾಲಕ ಸಾವು….!!

ಬೆಳ್ತಂಗಡಿ : ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ.

ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಅದರ ಹಗ್ಗ ಸಿಲುಕಿ ಕೆಲಗೆ ಬಿದ್ದಿದ್ದು, ಅದನ್ನು ನೋಡಿದ ಬಾಲಕನ ತಂಗಿ ತಂದೆಗೆ ತಿಳಿಸಿದ್ದು, ತಕ್ಷಣ ಬಾಲಕನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ದಾರಿಮದ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.