![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಸಿಎಸ್ಐ ಚರ್ಚ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ ಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಚಂದ್ರಶೇಖರ್ (52) ಎಂದು ಗುರುತಿಸಲಾಗಿದೆ. ಮೂಲತಃ ಮೂಳೂರು ನಿವಾಸಿಯಾಗಿದ್ದು ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಿರುವ ಚಂದ್ರಶೇಖರ್ ಅವರು ಮಾರಿಪೂಜೆ ಪ್ರಯುಕ್ತ ಮೂಳೂರಿಗೆ ಆಗಮಿಸಿದ್ದರು. ಮೂಳೂರು ಪೇಟೆಗೆ ಬಂದು ವಾಪಾಸು ಮನೆಗೆ ಹೋಗಲೆಂದು ರಸ್ತೆ ಧಾಟುತ್ತಿದ್ದ ವೇಳೆ ಖಾಸಗಿ ಬಸ್ ಹೊಡೆದಿದೆ. ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.